ಕೆ ಎಸ್ ಆರ್ ಟಿ ಸಿ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಸ್ ಎಸ್ ಎಲ್ ಸಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು ಅಂತಿಮ ಪರೀಕ್ಷೆಗೆ ತನ್ನ ಕೆಲವು ವರ್ಗಿಕೃತ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಲು ಆದೇಶ ಹೊರಡಿಸಿದೆ.


ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, 2022/23 ನೇ ಸಾಲಿನ ಅಂತಿಮ ಪರೀಕ್ಷೆ ನಡೆಯುವ ಮಾ 31 ರಿಂದ ಎ 15 ರ ವರೆಗೆ ಪ್ರವೇಶ ಪತ್ರ ತೋರಿಸಿ ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದೆಂದು ತಿಳಿಸಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ಮರಳಲು ನಿಗಮ, ಗ್ರಾಮೀಣ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿ ಅದೇಶಿಸಿದೆ.

LEAVE A REPLY

Please enter your comment!
Please enter your name here