ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ – ಮಣ್ಣಿನಡಿ ಸಿಲುಕಿ 3 ಕಾರ್ಮಿಕರ ದುರ್ಮರಣ

ಮಂಗಳೂರು: ಸುಳ್ಯ ಗಾಂಧಿನಗರದ ಗುರುಂಪು ಎಂಬಲ್ಲಿ ಮನೆಯೊಂದರ ಹಿಂಬಾಗ ತಡೆಗೋಡೆ ನಿರ್ಮಾಣದ ವೇಳೆ  ಮಣ್ಣು ಜರಿದು ಮೂವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಮಣ್ಣಿನಡಿ ಸಿಲುಕಿರುವ ಮೂವರು ಕಾರ್ಮಿಕರು ಧಾರವಾಡ ಮೂಲದವರು ಎನ್ನಲಾಗಿದ್ದು ಇವರ ಪೈಕಿ ಒಬ್ಬರು ಮಹಿಳೆಯಾಗಿದ್ದಾರೆ ಎನ್ನಲಾಗಿದೆ.

ಗುರುಂಪು ನಿವಾಸಿ ಅಬೂಬಕ್ಕರ್‌ ಎಂಬವರ ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಿಸಲು ಗುತ್ತಿಗೆ ನೀಡಲಾಗಿತ್ತು. ಅಚಾನಕ್ಕಾಗಿ ಮಣ್ಣು ಕುಸಿದು ಈ ದುರ್ಘಟನೆ ಸಂಭವಿಸಿದ್ದು ಜೆಸಿಬಿ  ಮೂಲಕ ಮಣ್ಣಿನ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಮಣ್ಣಿನಡಿ ಸಿಲುಕಿರುವ ಎರಡು ದೇಹವನ್ನು ಹೊರ ತೆಗೆಯಲಾಗಿದ್ದು, ಇನ್ನೊಂದು ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಅಗ್ನಿ ಶಾಮಕದಳ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here