ಆಸ್ತಿಗಾಗಿ ಹೆತ್ತಬ್ಬೆಗೆ ಹಲ್ಲೆ ಮಾಡಿದನೇ ಈ ಮಗ……?

ಮಂಗಳೂರು: ಆಸ್ತಿ ವಿಚಾರವಾಗಿ ಹೆತ್ತ ತಾಯಿಗೆ ಹಾಗೂ ಸಹೋದರನಿಗೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಹಲ್ಲೆ ನಡೆಸಿ, ಬೆದರಿಸಿ ಮಗ ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ ಹಿರಿಯ ಪುತ್ರ ಚೇತನ್‌ ಕುಮಾರ್ ಸಂಜೆ  ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಮನೆಯ ಅಡಿಗೆಕೋಣೆಯಿಂದ ಅಮ್ಮ ರೋಹಿಣಿ ಅಳುವ ಶಬ್ದ ಕೇಳಿಬರುತ್ತಿತ್ತು. ತಕ್ಷಣ ಅಡುಗೆ ಕೋಣೆಗೆ ಓಡಿಹೋದ ಚೇತನ್‌ ಗೆ ತಮ್ಮ ಸಚಿನ್‌ ಅಮ್ಮನ ತಲೆ ಕೂದಲು ಹಿಡಿದು, ಮುಖಕ್ಕೆ ಕೈಯಿಂದ ಹೊಡೆಯುತ್ತಾ, ನನಗೆ ಜಾಗದಲ್ಲಿ ಪಾಲುಕೊಡಿ, ಇಲ್ಲದಿದ್ದರೆ ನಿಮ್ಮನ್ನು ಬದುಕಲು ಬಿಡುವುದಿಲ್ಲ ಎಂದು ಹೇಳುತ್ತಿರುವುದು ಕಂಡು ಬಂದಿದೆ. ತಡೆಯಲು ಮುಂದಾದ  ಸಚಿನ್ ಅಲ್ಲೇ ಇದ್ದ ಚೂರಿಯಿಂದ ಅಮ್ಮನಿಗೆ ಚುಚ್ಚಲು ಮುಂದಾಗಿದ್ದಾನೆ. ಚೇತನ್‌ ಚೂರಿಯನ್ನು ಕಸಿಯುತ್ತಿದ್ದಂತೆ ಅಡುಗೆ ಕೋಣೆಯಲ್ಲಿದ್ದ ಕಲ್ಲನ್ನು ತೆಗೆದು ಚೇತನ್‌ ತಲೆಯ ಹಿಂಬದಿಗೆ ಹೊಡೆದು ಕೈಗೆ ಕಚ್ಚಿ, ನೀವು ನನಗೆ ಜಾಗದಲ್ಲಿ ಪಾಲು ಕೊಡದೇ ಇದ್ದಲ್ಲಿ ನಿಮ್ಮನ್ನು ಕೊಲ್ಲದೇ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿ ಓಡಿಹೋಗಿದ್ದಾನೆ. ಚೇತನ್‌ ಮತ್ತು ತಾಯಿ ರೋಹಿಣಿಯವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ವೇಳೆ ಸಚಿನ್‌, ಅಣ್ಣ ಚೇತನ್‌ “ನನ್ನ ಜಮೀನಿನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿ ತಾಯಿ ರೋಹಿಣಿ ತಂದೆ ಹಾಗೂ ಚಿಕ್ಕಪ್ಪನನ್ನು ಕರೆದು ಎದೆಗೆ ತುಳಿದು ಚೂರಿಯಿಂದ ಇರಿದಿದ್ದಾರೆ. ಇದಕ್ಕೆ ತಾಯಿ ರೋಹಿಣಿ ಸಹಕರಿಸಿದ್ದು, ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಾಗ ತಂದೆ ನಾರಾಯಣ ಗೌಡ “ಈಗ ನೀನು ಓಡಿದ್ದೀಯಾ ನಿನ್ನನ್ನು ಸುಪಾರಿ ಕೊಟ್ಟು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here