ನಾಪತ್ತೆಯಾಗಿದ್ದ ಶಿಕ್ಷಕ ಶವವಾಗಿ ಪತ್ತೆ

ಮಂಗಳೂರು: ನೀರ್ಚಾಲು ಮಾನ್ಯದಿಂದ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕರೋರ್ವರ ಮೃತದೇಹ ಕಾಸರಗೋಡು ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.

ಮಾನ್ಯ ಜ್ಞಾನೋದಯ ಅನುದಾನಿತ ಶಾಲೆಯ ಶಿಕ್ಷಕ, ಮಟ್ಟನ್ನೂರಿನ ಟಿ.ವಿ. ಪ್ರದೀಪ್ ಕುಮಾರ್(51) ಮೃತ ಪಟ್ಟವರು. ದುರ್ವಾಸನೆ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಬಾವಿಯಲ್ಲಿ ಪರಿಶೀಲನೆ ನಡೆಸುವ ವೇಳೆ ಮೃತದೇಹ ಪತ್ತೆಯಾಗಿದೆ. ಮೃತದೇಹವು 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕ ಪ್ರದೀಪ್ ಕುಮಾರ್ ರವರ ಮೃತದೇಹ ಎಂದು ತಿಳಿದು ಬಂದಿದೆ. ಮಾರ್ಚ್ 22ರಿಂದ ಪ್ರದೀಪ್ ಕುಮಾರ್ ನಾಪತ್ತೆಯಾಗಿದ್ದು, ಪತ್ನಿ ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here