ಬೈಕ್ ಟಿಪ್ಪರ್ ಡಿಕ್ಕಿ 22 ರ ತರುಣ ಆದಿಲ್ ಮರಣ

ಮಂಗಳೂರು: ಮೋಟಾರ್ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು,ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಮಾರ್ಚ್ 28ರಂದು ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ.


ಮೃತ ವಿದ್ಯಾರ್ಥಿಯನ್ನು ಮಂಜೇಶ್ವರ ಕುಂಜತ್ತೂರಿನ ಆದಿಲ್ (22) ಎಂದು ಗುರುತಿಸಲಾಗಿದೆ. ಕುಂಬಳೆ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿರುವ ಆದಿಲ್ ಕಾಲೇಜಿನಿಂದ ವಾಪಾಸ್ ಆಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿದ್ದ ಸಹ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here