ಕಣ್ಣ ಮುಂದೆಯೇ ಹೊತ್ತಿ ಉರಿದ ಕಾರು

ಮಂಗಳೂರು: ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಡಸ್ಟರ್ ಕಾರೊಂದು ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಮಾಸ್ತಿಹಳ್ಳಿ ಗೇಟ್ ಬಳಿ ಬೆಂಕಿಗೆ ಆಹುತಿಯಾಗಿದೆ. ಸಯ್ಯದ್ ಫಾರಸ್ ಮತ್ತವರ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಕಾರು ನಿಲ್ಲಿಸಿ ಕಾರಿನಲ್ಲಿದ್ದವರು ಹೊಬಂದರಾದರೂ ನೋಡ ನೋಡುತ್ತಲೇ ಬೆಂಕಿ ಆವರಿಸಿ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ. ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here