ಗೇಟ್‌ ಕಿತ್ತೆಸೆದ ಡಿವೈಎಫ್‌ಐ- ಹರೇಕಳ-ಅಡ್ಯಾರ್ ಸೇತುವೆ ಸಂಚಾರಕ್ಕೆ ಮುಕ್ತ

ಮಂಗಳೂರು: ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಇನ್ನೂ ಉದ್ಘಾಟನೆಗೊಳ್ಳದ ನೂತನ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುಗುವುದು ಎಂದು ಹೇಳಲಾಗಿತ್ತು.

ಸಣ್ಣ ನೀರಾವರಿ ಇಲಾಖೆಯ ಆದೇಶ ಸಿಗದೆ ಇರುವುದು ಮತ್ತು ನ್ಯಾಯಾಲಯದ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಮುಕ್ತವಾಗಿರಲಿಲ್ಲ. ಈ ನಡುವೆ ಸೋಮವಾರ ಖುದ್ದಾಗಿ ಅಧಿಕಾರಿಗಳು ಕುಂಬಳಕಾಯಿಯೊಂದಿಗೆ ಹರೇಕಳಕ್ಕೆ ಬಂದು ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲು ಮುಂದಾದರೂ ನೀತಿ ಸಂಹಿತೆ ಅಡ್ಡಿಯಾಗಿದೆ. ಇದರಿಂದ ಬೇಸತ್ತ ಹರೇಕಳ ಡಿವೈಎಫ್ಐ ಘಟಕ ನಿನ್ನೆ ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಿತ್ತು. ಇಂದು ಬೆಳಿಗ್ಗೆ ಡಿವೈಎಫ್ಐ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಸಾರ್ವಜನಿಕರ ಸಹಕಾರದಲ್ಲಿ ಸೇತುವೆಯ ಎರಡೂ ಕಡೆಗಳಲ್ಲಿ ಅಳವಡಿಸಲಾಗಿದ್ದ ಗೇಟುಗಳನ್ನು ಕಿತ್ತೆಸೆದು ಸಾರ್ವಜನಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here