



ಮಂಗಳೂರು : ಕಾಂಗ್ರೆಸ್ ಮುಖಂಡ ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಎರಡು ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.







ದಾಳಿ ಕುರಿತು ಪ್ರತಿಕ್ರಿಯಿಸಿರುವ ವಿವೇಕ ರಾಜ್ ನನ್ನ ವ್ಯವಹಾರದ ದಾಖಲೆ ಪತ್ರಗಳು ಸಮರ್ಪಕವಾಗಿವೆ ನಾನು ತೆರಿಗೆ ವಂಚಿಸಿ ವ್ಯವಹಾರ ಮಾಡುವುದಿಲ್ಲ, ಇದು ಬಿಜೆಪಿ ಕುಮ್ಮಕ್ಕಿನಿಂದ ನಡೆದ ದಾಳಿಯಾಗಿದೆ ಎಂದು ಹೇಳಿದ್ದಾರೆ. ಬೆಳಿಗ್ಗೆ ಸುಮಾರು ಏಳು ಗಂಟೆಗೆ 14 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರಿಗೆ ಸೇರಿದ ಅತ್ತಾವರ ಮತ್ತು ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗಳಿಗೆ ಹಾಗೂ ವಿವೇಕ ನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.














