ಮೈಸೂರು ಪಟಾಕಿ ದಾಸ್ತಾನು ಮಳಿಗೆಗೆ ಬೆಂಕಿ

ಮಂಗಳೂರು: ಮೈಸೂರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಜುಪಿಟರ್ ಪಟಾಕಿ ದಾಸ್ತಾನು ಮಳಿಗೆಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಲಕ್ಷಾಂತರ ಮೌಲ್ಯದ ಪಟಾಕಿ ದಾಸ್ತಾನು ಹೊತ್ತಿ ಉರಿದ ಘಟನೆ ಬುಧವಾರ ನಡೆದಿದೆ.

ಬಿರು ಬೇಸಿಗೆಯ ತಾಪದಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡಬಾರದೆಂದು ಮೈಸೂರು ಕೈಗಾರಿಕೆಗಳ ಸಂಘ 15 ವರ್ಷಗಳಿಂದ ನೀಡುತ್ತಿರುವ ಮನವಿಗೆ ಸ್ಪಂದಿಸದೆ ಅನುಮತಿಯನ್ನು ನೀಡಲಾಗಿತ್ತು. ಹೆಬ್ಬಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ಮುಂದುವರೆದಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here