ಮಂಗಳಮುಖಿಯರಿಂದ ಯುವಕನ ಮೇಲೆ ಹಲ್ಲೆ

ಮಂಗಳೂರು:ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಕೆಳಗಡೆ ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ಮೇ.19ರಂದು ಸಂಜೆ ವೇಳೆ ನಡೆದಿದೆ.

ಸಂಜೆ ವೇಳೆಗೆ ಫ್ಲೈಒವರ್ ಕೆಳಗೆ ಬೀಡು ಬಿಡುವ ಮಂಗಳಮುಖಿಯರು ಅನೈತಿಕ ಚಟುವಟಿಕೆಗೆ ಪ್ರಚೋದನೆ ನೀಡುವಂತಹ ಕೆಲಸ ನಡೆಯುತ್ತಿದ್ದು, ಇದೇ ವಿಚಾರದಲ್ಲಿ ಯುವಕನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಹಲ್ಲೆ ನಡೆದ ತಕ್ಷಣ ಸ್ಥಳೀಯರು ಜಮಾಯಿಸಿದ್ದು ಮಂಗಳಮುಖಿಯರ ಅನೈತಿಕ ಚಟುವಟಿಕೆಗಳ ವಿರುದ್ದ ಸಿಡಿದೆದ್ದಿದ್ದಾರೆ. ಇದೇ ವೇಳೆ ಮತ್ತೆ ಕೆಲವು ಮಂಗಳಮುಖಿಯರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವ ಬಗ್ಗೆ  ಮಾಹಿತಿ ಪಡೆದ ಉರ್ವಾ ಠಾಣಾ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here