ರಾಜ್ಯದ ನೂತನ ಅಡ್ವೊಕೇಟ್‌ ಜನರಲ್‌ ಆಗಿ ಶಶಿಕಿರಣ್‌ ಶೆಟ್ಟಿ ನೇಮಕ

ಮಂಗಳೂರು(ಬೆಂಗಳೂರು): ರಾಜ್ಯದ ನೂತನ ಅಡ್ವೊಕೇಟ್‌ ಜನರಲ್‌ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಮೊದಲ ಸಂಪುಟ ಸಭೆಯಲ್ಲಿ ಎಜಿ ಆಯ್ಕೆ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಶಶಿಕಿರಣ್‌ ಶೆಟ್ಟಿ ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಪುತ್ರರಾಗಿದ್ದಾರೆ. ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿರುವ ಶಶಿಕಿರಣ್‌ ಶೆಟ್ಟಿ ಅವರನ್ನು ಬಿಜೆಪಿ ಸರಕಾರದ ಅವಧಿಯಲ್ಲಿ ಎಜಿ  ಆಗಿದ್ದ ಪ್ರಭುಲಿಂಗ ನಾವದಗಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾಬಕ್ಕೆ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here