ಯು.ಆರ್. ಸಭಾಪತಿ ಇನ್ನಿಲ್ಲ

ಮಂಗಳೂರು(ಉಡುಪಿ): ಹಿರಿಯ ರಾಜಕಾರಣಿ ಯು.ಆರ್.ಸಭಾಪತಿ(71) ಅಲ್ಪ ಕಾಲದ ಅಸೌಖ್ಯದ ಬಳಿಕ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಉಡುಪಿ ಬಡಗುಪೇಟೆ ನಿವಾಸಿಯಾಗಿರುವ ಸಭಾಪತಿ 1994 ರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಕೆಸಿಪಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡ ಬಳಿಕ 1999 ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ವಿಧಾನಸಭೆಗೆ ಮರು ಆಯ್ಕೆಯಾಗಿದ್ದಾರೆ. 2004 ರಲ್ಲಿ ರಘುಪತಿ ಭಟ್‌ ವಿರುದ್ದ ಪರಾಜಯಗೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒರ್ವ ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here