ಗಾಂಜಾ ಪ್ರಕರಣ- ಜಿಲ್ಲಾ ಕಾರಾಗೃಹ ಸಿಬ್ಬಂದಿ ಅಮಾನತು

ಮಂಗಳೂರು: ಕೈದಿಗಳಿಗೆ ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಜಿಲ್ಲಾ ಕಾರಾಗೃಹ ಸಿಬ್ಬಂದಿ ಪ್ರಕಾಶ್‌ ಗಾನಡೆ ಎಂಬವರನ್ನು ಸೇನೆಯಿಂದ ಅಮಾನತು ಗೊಳಿಸಲಾಗಿದೆ.

ಕಾರಾಗೃಹದಲ್ಲಿ ಕೆಐಎಸ್‌ಎಫ್ ಅಧಿಕಾರಿಗಳ ತಪಾಸಣೆ ವೇಳೆ ಪ್ರಕಾಶ್‌ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಎನ್‌ ಡಿ ಪಿ ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಇದೀಗ ಪ್ರಕಾಶ್‌ನನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here