ರಾಷ್ಟ್ರೀಯ ಮಟ್ಟದ ವಾಲಿಬಾಲ್‌ ಆಟಗಾರ್ತಿ ಸಾಲಿಹತ್‌ ಹೃದಯಘಾತದಿಂದ ನಿಧನ

ವಿದ್ಯಾರ್ಥಿ ದೆಸೆಯಲ್ಲಿಯೇ ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್‌ ಆಟಗಾರ್ತಿಯಾಗಿದ್ದ ಉಜಿರೆ ಎಸ್‌ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಾಲಿಹತ್‌ (24) ಹೃದಯಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಪದಗಂಡಿ ಪೊಯ್ಯಗುಡ್ಡೆ ನಿವಾಸಿ ಆದಂ ಮತ್ತು ಹವ್ವ ದಂಪತಿಯ ಪುತ್ರಿಯಾಗಿರುವ ಸಾಲಿಹತ್‌ ಒಂದು ವರ್ಷದ ಹಿಂದೆ ವಿವಾಹಿತರಾಗಿ ಚಿಕ್ಕಮಗಳೂರಿನ ಪತಿ ಮನೆಯಲ್ಲಿ ನೆಲೆಸಿದ್ದರು. ಹೃದಯ ಬೇನೆ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ(ಮೇ.31) ಬೆಳಗ್ಗೆ ನಿಧನರಾಗಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್‌ ಎಂ.ಎಸ್‌ ಗರಡಿಯಲ್ಲಿ ಪಳಗಿ ಉತ್ತರ ಪ್ರದೇಶದ ಅಲಹಬಾದ್‌ ನಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್‌ನಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಪಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ, ದಕ್ಷಿಣ ವಲಯ ಸೀನಿಯರ್‌ ನ್ಯಾಶನಲ್‌ ನಲ್ಲಿ ಚಿನ್ನದ ಪದಕ, ಜ್ಯೂನಿಯರ್‌ ನ್ಯಾಶನಲ್‌ ನಲ್ಲಿ ತೃತೀಯ ಸ್ಥಾನ ಮೂಲಕ ಹಿರಿಮೆ ಮೆರೆದಿದ್ದರು.

LEAVE A REPLY

Please enter your comment!
Please enter your name here