ಕೋಪದಲ್ಲಿ  ಸ್ಥಿಮಿತ ಕಳೆದುಕೊಂಡು ಮಗಳನ್ನು 25 ಬಾರಿ ಇರಿದು ಕೊಂದ ತಂದೆ

ಮಂಗಳೂರು: ಕೌಟುಂಬಿಕ ಕಲಹದಲ್ಲಿ ಕೋಪಗೊಂಡು ಸ್ಥಿಮಿತ ಕಳೆದುಕೊಂಡ ವ್ಯಕ್ತಿಯೊಬ್ಬ ತನ್ನ ಮಗಳನ್ನು 25 ಬಾರಿ ಇರಿದು ಕೊಲೆ ಮಾಡಿದ ಘಟನೆ ಸೂರತ್ ನಲ್ಲಿ ನಡೆದಿದೆ.


ಸೂರತ್ ನ ಕಡೋದರಾ ಪ್ರದೇಶದ ಸತ್ಯನಗರ ಸೊಸೈಟಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ರಾಮಾನುಜ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ತನ್ನ ಮಗಳು ಟೆರೇಸ್ ನಲ್ಲಿ ಮಲಗಿದ್ದಾಳೆ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಪತ್ನಿಯೊಂದಿಗೆ ನಡೆದ ಜಗಳ ವಿಕೋಪಕ್ಕೆ ತೆರಳಿ ತಾಳ್ಮೆ ಕಳೆದುಕೊಂಡ ರಾಮಾನುಜ ಮಗಳನ್ನು ಇರಿದು ಹತ್ಯೆ ಮಾಡಿದ್ದಾನೆ.

ರಾತ್ರಿ ಸುಮಾರು 11:30ರ ವೇಳೆ ಪತ್ನಿಯೊಂದಿಗೆ ಜಗಳವಾಡಿದ ರಾಮಾನುಜ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ತಾಯಿಯನ್ನು ರಕ್ಷಿಸಲು ಮಕ್ಕಳು ತಂದೆಯನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಕೋಪಗೊಂಡ ರಾಮಾನುಜ ಮಗಳನ್ನು ಹಿಡಿದು 25 ಬಾರಿ ಚಾಕುವಿನಿಂದ ಚುಚ್ಚಿದ್ದಾನೆ. ಆಕೆ ತಪ್ಪಿಸಿಕೊಂಡು ಕೋಣೆಯೊಳಗೆ ಹೋದರು ಅಲ್ಲಿಯೂ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಮತ್ತೆ ಪತ್ನಿಯನ್ನು ಇರಿಯಲು ಪ್ರಯತ್ನಿಸಿದ್ದು ಆಕೆ ತಪ್ಪಿಸಿಕೊಂಡು ಟೇರೆಸ್‌ ಮೇಲೆ ಹೋಗಿದ್ದಾಳೆ. ಮಾಹಿತಿ ಪಡೆದ ಸುರತ್ ಪೊಲೀಸರು ಸ್ಥಳಕ್ಕಾಗಮಿಸಿ ರಾಮಾನುಜನನ್ನು ಬಂಧಿಸಿ ಕೊಲೆಗೆ ಬಳಸಿದ ಅಸ್ತ್ರವನ್ನು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆ ಎಲ್ಲೆಡೆ ವೈರಲ್‌ ಆಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here