ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಆರೋಪಿ ಆದಿತ್ಯರಾವ್ ವಿರುದ್ಧ ಶಿವಮೊಗ್ಗ ಠಾಣೆಯಲ್ಲಿ ದೂರು ದಾಖಲು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗ್ರಹದ ಅಧಿಕಾರಿಗಳು ದೂರು ನೀಡಿದ್ದಾರೆ. ಜೈಲಿನಲ್ಲಿದ್ದ ಎರಡು ಟಿವಿಗಳನ್ನು ಒಡೆದು ಹಾಕಿರುವ ಆದಿತ್ಯ ವಿರುದ್ಧ ಸಾರ್ವಜನಿಕ ಸ್ವತ್ತು ನಾಶಪಡಿಸಿದ ಆರೋಪದಲ್ಲಿ ಜೈಲಿನ ಚೀಫ್ ಸೂಪರಿoಟೆಂಡೆಂಟ್ ದೂರು ನೀಡಿದ್ದು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here