ಉಳ್ಳಾಲ ಅನೈತಿಕ ಪೊಲೀಸ್ ಗಿರಿ ಪ್ರಕರಣ – ಸಂತ್ರಸ್ತ ವಿದ್ಯಾರ್ಥಿಗಳಿಗೆ ಪೊಲೀಸರಿಂದ ಹಲ್ಲೆ ಆರೋಪ- ಕಮಿಷನರ್ ಗೆ ದೂರು

ಮಂಗಳೂರು : ಉಳ್ಳಾಲ ಸಮೀಪದ ಸೋಮೇಶ್ವರ ಬೀಚಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳ ಮೇಲೆ ಉಳ್ಳಾಲ ಎಸ್ಐ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣದ ವಿಚಾರಣೆಗಾಗಿ ನಮ್ಮನ್ನು ಠಾಣೆಗೆ ಕರೆಯಿಸಿದ ಉಲ್ಲಾಳ ಎಸ್ಐ ಸಂತೋಷ್ ಖಾಲಿ ಕಾಗದಕ್ಕೆ ಬಲವಂತಾಗಿ ಸಹಿ ಹಾಕಿಸಿದ್ದಾರೆ.

ಇದನ್ನು ಪ್ರಶ್ನಿಸಿದ ನನಗೆ ಹಲ್ಲೆ ಗೈದಿದ್ದಾರೆ ಎಂದು ವಿದ್ಯಾರ್ಥಿಯೊಬ್ಬ ಕಮಿಷನರ್ ಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರನ್ನು ಕೂಡ ಪೊಲೀಸರು ಠಾಣೆಗೆ ಕರೆಯಿಸಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಬೀಚಿನಲ್ಲಿದ್ದ ವಿದ್ಯಾರ್ಥಿನಿಯರು ಯುವಕರನ್ನು ಠಾಣೆಗೆ ಕರೆಸಲು ಉಳ್ಳಾಲದ ಮಹಿಳಾ ರಕ್ಷಣಾ ವೇದಿಕೆ ಆಗ್ರಹಿಸಿದೆ. ದಿ ಕೇರಳ ಸ್ಟೋರಿ ಸಿನಿಮಾದಂತಹ ವಾತಾವರಣದಲ್ಲಿ ಹಿಂದೂ ಹೆಣ್ಣುಮಕ್ಕಳು ಇದ್ದಾರೆ ಅನ್ನುವುದಕ್ಕೆ ಸೋಮೇಶ್ವರದಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ವೇದಿಕೆ ಹೇಳಿದೆ.

LEAVE A REPLY

Please enter your comment!
Please enter your name here