ತುಮಕೂರಿನ ಬಿಜೆಪಿ ಕಾರ್ಯಕರ್ತೆ ವಿರುದ್ಧ ಒಡಿಶಾ ಪೊಲೀಸರಿಂದ ಕೇಸು ದಾಖಲು

ಮಂಗಳೂರು: ಒಡಿಶಾದ ರೈಲು ದುರಂತಕ್ಕೆ ಮಸೀದಿ ಕಾರಣವೆಂದು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಫೋಟೋ ಶೇರ್ ಮಾಡಿ ವಿವಾದ ಸೃಷ್ಟಿಸಿದ್ದು, ಮಾಹಿತಿ ಕಲೆ ಹಾಕಿದ ಒಡಿಶಾ ಪೊಲೀಸರು ಆಕೆಯ ಮೇಲೆ ಕೇಸ್ ದಾಖಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎನ್ನುವವರು ತ್ರಿವಳಿ ರೈಲು ದುರಂತದ ಸಮೀಪದ ಮಸೀದಿ ಕಡೆಗೆ ಬಾಣದ ಗುರುತು ಮಾಡಿ ಪೋಸ್ಟ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಾರಿ ಚರ್ಚೆಗೆ ಕಾರಣವಾಗಿತ್ತು. ವಿವಾದಕ್ಕೆ ತಿರುಗುತ್ತಿದ್ದಂತೆಯೇ ಒಡಿಶಾ ಪೊಲೀಸರು ಈಗ ಕೇಸ್ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here