ಗೃಹಪ್ರವೇಶ ನಡೆದ ಐದೇ ದಿನಕ್ಕೆ ಮನೆಯೊಡತಿ ಆತ್ಮಹತ್ಯೆ – ಕುಂಪಲದಲ್ಲೊಂದು ಘಟನೆ

ಮಂಗಳೂರು: ಅದ್ದೂರಿಯಾಗಿ ಗೃಹ ಪ್ರವೇಶ ನಡೆಸಿ, ಐದೇ ದಿನದಲ್ಲಿ ಅದೇ ಮನೆಯ ಕೋಣೆಯೊಳಗೆ ಮನೆ ಮಾಲಕಿ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಂಜಲಿ ನಗರದಲ್ಲಿ ನಡೆದಿದೆ.

ಮೂಲತ: ಪರಂಗಿಪೇಟೆಯವರಾಗಿದ್ದು ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿರುವ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಮನೆ ಮಾಲಕಿಯಾಗಿದ್ದಾರೆ. ಕಳೆದ ರಾತ್ರಿ ತನ್ನ ಸ್ನೇಹಿತೆಯೊಂದಿಗೆ ಚಾಟ್ ಮಾಡಿದ್ದು, ಬೆಳಿಗ್ಗೆ ಸ್ನೇಹಿತೆ ಬಂದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೆದ್ದಿರುವುದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದ್ದು, ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿರುವುದಾಗಿ, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದು ಕುಂಪಳದ ಚಿತ್ರಾಂಜಲಿ ನಗರದಲ್ಲಿ ಎಂಬವರಿಂದ ಮನೆಯೊಂದನ್ನು ಖರೀದಿಸಿದ್ದರು. ಜೂನ್ ಮೂರರಂದು ಗೃಹಪ್ರವೇಶ ಮಾಡಿ ತಾಯಿ ಮತ್ತು ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ಇಲ್ಲಿ ವಾಸವಾಗಿದ್ದರು. ಸಂಕಷ್ಟಕ್ಕೆ ಒಳಗಾಗಿರುವ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

LEAVE A REPLY

Please enter your comment!
Please enter your name here