ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು

ಮಂಗಳೂರು: ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿ ಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ನನ್ನ ಜೀವನದಲ್ಲಿ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದಾರೆ. ಶಾಮನೂರು ನಾವು ಹಳೆಯ ಸ್ನೇಹಿತರು ಹೀಗಾಗಿ ಭೇಟಿಯಾಗಿದ್ದೆವು. ಈಗಾಗಲೇ ಮಾತನಾಡಿದವರಿಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ತಮ್ಮದೇ ಪಕ್ಷದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಹೇಳಿಕೆ ಬಿಜೆಪಿ ಪಕ್ಷದಲ್ಲಿ ತಲ್ಲಣ ಸೃಷ್ಟಿಸಿತ್ತು.

LEAVE A REPLY

Please enter your comment!
Please enter your name here