ಜನವರಿಯಲ್ಲಿ ಅಯೋಧ್ಯೆ ರಾಮಲಲ್ಲನ ವಿಗ್ರಹದ ಪ್ರತಿಷ್ಠಾಪನೆ

ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರದಲ್ಲಿ ರಾಮಲಲ್ಲನ ವಿಗ್ರಹದ ಪ್ರತಿಷ್ಠಾಪನೆ ಕಾರ್ಯಕ್ರಮದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಶ್ರೀರಾಮಲಲ್ಲನ ವಿಗ್ರಹದ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮುನ್ನ ಈ ವರ್ಷಾಂತ್ಯದಲ್ಲಿ ಅಯೋಧ್ಯೆಯಲ್ಲಿ ಭವ್ಯವಾದ ದೀಪೋತ್ಸವವನ್ನು ಆಚರಿಸಲಾಗುವುದು. ಆಗ ಈ ದೇಗುಲ ನಗರದಾದ್ಯಂತ 21 ಲಕ್ಷ ದೀಪಗಳನ್ನು ಬೆಳಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸುಮಾರು 500 ವರ್ಷಗಳ ಬಳಿಕ ರಾಮಲಲ್ಲ ತನ್ನ ಮಂದಿರದಲ್ಲಿ ವಿರಾಜಮಾನನಾದಾಗ ಇಡೀ ಜಗತ್ತು ಭಾರತದಡೆಗೆ ಆಕರ್ಷಿತವಾಗಲಿದೆ ಎಂದು ಯೋಗಿ ಆದಿತ್ಯನಾಥ  ಹೇಳಿದ್ದಾರೆ.

ಜನವರಿ 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟಿಸಲು ದೇವಾಲಯದ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಿದೆ ಎಂಬ ವರದಿಗಳ ನಡುವೆ ಯೋಗಿಯವರು ಈ ವಿಷಯವನ್ನು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ ಅಂತಿಮ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ವರದಿಗಳು ತಿಳಿಸಿದೆ.

LEAVE A REPLY

Please enter your comment!
Please enter your name here