ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ತಡರಾತ್ರಿಯೂ ʼಶಕ್ತಿʼ ಮೆರೆದ ಮಹಿಳಾ ಪ್ರಯಾಣಿಕರು

ಮಂಗಳೂರು: ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣದ ಸರಕಾರಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ವಾರಾಂತ್ಯವಾಗಿದ್ದರಿಂದ ತಡರಾತ್ರಿ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭಾರಿ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಆಗಮಿಸಿದ್ದರು.

ರಾತ್ರಿ ಹನ್ನೆರಡು ಗಂಟೆಯಾದರೂ ಕೆಂಪು ಬಸ್ಸುಗಳಿಗೆ ಬಾರಿ ಬೇಡಿಕೆ ಕಡಿಮೆಯಾಗಿರಲಿಲ್ಲ. ಶಿವಮೊಗ್ಗ, ತುಮಕೂರು, ಚಿತ್ರದುರ್ಗಕ್ಕೆ ತೆರಳುವ ಬಸ್ಸುಗಳಲ್ಲಿ ಜನ ನಿಂತುಕೊಂಡೇ ಸಂಚರಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಕೆ ಎಸ್ ಆರ್ ಟಿ ಸಿ ಯಿಂದ ಹೆಚ್ಚುವರಿ ಬಸವ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ, ಬಂದ ಬಸ್ಸುಗಳಲ್ಲಿ ತೆರಳುವಂತೆ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ ಮಹಿಳಾ ಪ್ರಯಾಣಿಕರನ್ನು ಮನವೊಲಿಸುವ ದೃಶ್ಯವೂ ಕಂಡು ಬಂತು. ಮಧ್ಯರಾತ್ರಿಯಾದರು ಮಹಿಳೆಯರು ಸಾಲಿನಲ್ಲಿ ನಿಂತು ಮುಂಗಡ ಬುಕ್ಕಿಂಗ್ ಮಾಡಿ ಟಿಕೆಟ್ ಪಡೆದು ಸಂಚರಿಸಿದ್ದು ವಿಶೇಷವಾಗಿತ್ತು.

LEAVE A REPLY

Please enter your comment!
Please enter your name here