ಚಾಕೊಲೆಟ್ ಗೆ ಹಣ ನೀಡದ ಕೋಪ – ಫ್ರೀ ಬಸ್‌ ಹತ್ತಿ ಧರ್ಮಸ್ಥಳಕ್ಕೆ ಬಂದ ಬಾಲಕಿಯರು – ಪೋಷಕರ ಪರದಾಟ

ಮಂಗಳೂರು(ಬೆಂಗಳೂರು): ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದು ಪೊಲೀಸರು ತಲೆ ಕಡೆಸಿಕೊಳ್ಳುವಂತೆ ಮಾಡಿದೆ. ಚಾಕೊಲೆಟ್ ತಿನ್ನಲು ಹಣ ಕೊಡಲಿಲ್ಲ ಎಂದು 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋಗಿದ್ದಾರೆ.

ಇಬ್ಬರು‌ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದರಿಂದ ಪೋಷಕರು ಕಕ್ಕಾಬಿಕ್ಕಿಯಾಗಿದ್ದು, ತಂದೆ ತಾಯಿ ಮೇಲಿನ ಕೋಪಕ್ಕೆ ಹೆಣ್ಣು ಮಕ್ಕಳು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಚಾಕೊಲೆಟ್ ಕೊಳ್ಳಲು ಹಣ ಕೇಳಿದ್ದಕ್ಕೆ ತಂದೆ ರೇಗಿದ್ದರು. ಇದರಿಂದ ಕೋಪಗೊಂಡ ಇಬ್ಬರು ಪುತ್ರಿಯರು ಕೋಣನಕುಂಟೆಯಿಂದ ಬಸ್ ಹತ್ತಿ ಫ್ರೀಯಾಗಿ ಧರ್ಮಸ್ಥಳಕ್ಕೆ ಹೋಗಿದ್ದಾರೆ.

LEAVE A REPLY

Please enter your comment!
Please enter your name here