ಸಂಪುಟ ಸಭೆಯಲ್ಲಿ ಚರ್ಚಿಸಿ ಅ.17 ಅಥವಾ 18ಕ್ಕೆ ಗೃಹಲಕ್ಷ್ಮಿ ಯೋಜನೆ ಜಾರಿ – ಸಚಿವೆ ಹೆಬ್ಬಾಳ್ಕರ್

ಮಂಗಳೂರು: ಗೃಹಲಕ್ಷ್ಮಿ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಂದಾಯ ಇಲಾಖೆ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಸುಧೀರ್ಘವಾಗಿ ಸಭೆ ನಡೆಸಲಾಗಿದೆ. ಗೃಹಲಕ್ಷ್ಮಿ ಯೋಜನೆ ಜಾರಿ ಬಗ್ಗೆ ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಆಗಸ್ಟ್ 17 ಅಥವಾ 18ರಂದು ಯೋಜನೆ ಜಾರಿ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ನೀಡುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ, ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಳಂಬಾಗುತ್ತಿದೆ. ಈ ನಿಟ್ಟಿನಲ್ಲಿ ಸರಳವಾಗಿ ಜನರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಇಲಾಖೆ ಪ್ರಯತ್ನ ನಡೆಸುತ್ತಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here