ಲೋಕಸಭಾ ಚುನಾವಣೆ – ಜೆಡಿಎಸ್‌ ಜೊತೆ ಹೊಂದಾಣಿಕೆ – ಸುಳಿವು ನೀಡಿದ ಸಿ ಪಿ ವೈ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ರಾಜ್ಯ ಬಿಜೆಪಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಮುನ್ನಡೆಯಲು ನಿರ್ಧರಿಸಿದೆ ಎನ್ನುವ ಹೇಳಿಕೆಗೆ ಈಗ ಪುಷ್ಟಿ ದೊರತಿದೆ.
ರಾಮನಗರದಲ್ಲಿ ಪಕ್ಷದ ನಾಯಕ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ನೀಡಿರುವ ಹೇಳಿಕೆ ಹೊಂದಾಣಿಕೆ ರಾಜಕಾರಣ ಕುರಿತಾದ ಚರ್ಚೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ.


ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು, ಜೆಡಿಎಸ್ ಜೊತೆ ಹೊಂದಾಣಿಕೆಯು ಆಗಬಹುದು, ಬದಲಾವಣೆ ಜೊತೆಯಲ್ಲಿ ನಾವು ಚುನಾವಣೆ ಎದುರಿಸುತ್ತೇವೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಈ ಬಾರಿಯೂ ಅತಿ ಹೆಚ್ಚು ಸಂಸದರನ್ನು ಲೋಕಸಭೆಗೆ ಕಳುಹಿಸಬೇಕು, ಅದಕ್ಕಾಗಿ ಸೂಕ್ತ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಇನ್ನು ಚುನಾವಣೆ ಸ್ಪರ್ಧೆ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಯೋಗೀಶ್ವರ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹೇಳಿದರೆ ಸ್ಪರ್ಧಿಸುತ್ತೇನೆ. ಟಿಕೆಟ್ ನೀಡುವುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here