ಮಣಿಪುರ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿ ಅಳಲು ಆಲಿಸಿದ ರಾಹುಲ್‌ ಗಾಂಧಿ

ಮಂಗಳೂರು(ಮಣಿಪುರ): ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ನಲ್ಲಿರುವ ಎರಡು ಆಶ್ರಯ ಶಿಬಿರಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಭೇಟಿ ನೀಡಿದ್ದಾರೆ.

ಬೆಳಿಗ್ಗೆ ಇಂಫಾಲ್ ನಿಂದ ಹೆಲಿಕಾಪ್ಟರ್ ಮೂಲಕ ಮೊಯಿರಾಂಗ್ ತಲುಪಿದ ರಾಹುಲ್ ಗಾಂಧಿ ಸಂತ್ರಸ್ತರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಿದರು. ರಾಹುಲ್ ಗಾಂಧಿ ಭೇಟಿ ನೀಡಿದ ಎರಡು ನಿರಾಶ್ರಿತ ಶಿಬಿರಗಳಲ್ಲಿ ಸುಮಾರು ಸಾವಿರ ಜನರು ಆಶ್ರಯ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದೆ.

ರಾಹುಲ್ ಗಾಂಧಿ ಇಂಫಾಲ್ ನಲ್ಲಿ ಬುದ್ಧಿಜೀವಿಗಳು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಭೇಟಿ ಮಾಡಲಿದ್ದಾರೆ. ಕಳೆದ ಎರಡು ತಿಂಗಳಿನಿಂದ ಈಶಾನ್ಯ ರಾಜ್ಯವನ್ನು ಬಾಧಿಸಿರುವ ಜನಾಂಗೀಯ ಗಲಭೆಯಲ್ಲಿ ಹೆಚ್ಚು ಹಾನಿಗೊಳಗಾದ ಪಟ್ಟಣಗಳಲ್ಲಿ ಒಂದಾದ ಚುರಚಂದಪುರದ ಪರಿಹಾರ ಶಿಬಿರಗಳಿಗೆ ಜೂನ್ 29 ರಂದು ರಾಹುಲ್ ಭೇಟಿ ನೀಡಿದ್ದರು. ರಾಹುಲ್ ಗಾಂಧಿಯವರೊಂದಿಗೆ ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಪಿ ಸಿ ಸಿ ಅಧ್ಯಕ್ಷ ಕೇಶಾಮ್ ಮೇಘಚಂದ್ರ ಸಿಂಗ್ ಜೊತೆಗಿದ್ದರು.

LEAVE A REPLY

Please enter your comment!
Please enter your name here