ತಲಕೋನ ಜಲಪಾತದಲ್ಲಿ ಮುಳುಗಿ ಮಂಗಳೂರು ಮೂಲದ ವಿದ್ಯಾರ್ಥಿ ಮೃತ್ಯು

ಮಂಗಳೂರು: ತಿರುಪತಿಯ ತಲಕೋನ ಜಲಪಾತದಲ್ಲಿ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮಂಗಳೂರು ಮೂಲದ ಸುಮಂತ್‌ ಎಂದು ಗುರುತಿಸಲಾಗಿದೆ.

ಮೃತ ಸುಮಂತ್ ಸ್ನೇಹಿತರ ಜೊತೆಗೆ ಟ್ರಿಪ್ಪಿಗೆ ಎಂದು ಹೋಗಿದ್ದ. ತಲಕೋನ ಜಲಪಾತಕ್ಕೆ ಧುಮುಕುತ್ತಿರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಆದರೆ ಬಹಳ ಸಮಯವಾದರೂ ಆತ ಮೇಲೆ ಬಾರದ ಕಾರಣ ಆತಂಕಗೊಂಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಸುಮಂತನ ತಲೆಯು ನೀರಿನಾಳದಲ್ಲಿ ಎರಡು ಬಂಡೆಗಳ ನಡುವೆ ಸಿಲುಕಿಕೊಂಡಿತ್ತು. ಮೃತ ದೇಹವನ್ನು ಜಲಪಾತದಿಂದ ಹೊರ ತೆಗೆಯಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸುಮಂತ್ ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here