ವಿಧಾನಸಭೆ, ವಿಧಾನ ಪರಿಷತ್‌ ಗೆ ಸಚೇತಕರ ಆಯ್ಕೆ

ಮಂಗಳೂರು: ವಿಧಾನಸಭೆಯ ಮುಖ್ಯ ಸಚೇತಕರಾಗಿ ಕಾಂಗ್ರೆಸ್ ನ ರಾಮದುರ್ಗ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಅಶೋಕ್ ಎಂ ಪಟ್ಟಣ ಆಯ್ಕೆಯಾಗಿದ್ದಾರೆ. ಇನ್ನು ವಿಧಾನ ಪರಿಷತ್ ಸಚೇತಕರಾಗಿ ಸಲೀಂ ಅಹಮದ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಣ್ಣ ನೀರಾವರಿ ಇಲಾಖೆ ಸಚಿವ ಎನ್ ಎಸ್ ಬೋಸರಾಜು ಅವರನ್ನು ವಿಧಾನಪರಿಷತ್ತಿನ ಸಭಾ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಮತ್ತೊಂದೆಡೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪನಾಯಕರನ್ನಾಗಿ ಶಾರದಾ ಪೂರಾ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ವಿಪಕ್ಷ ನಾಯಕರ ಆಯ್ಕೆ ಇನ್ನೂ ನಡೆದಿಲ್ಲ.

LEAVE A REPLY

Please enter your comment!
Please enter your name here