ಇದೇನಾ ಸಭ್ಯತೆ ? ಇದೇನಾ ಸಂಸ್ಕೃತಿ ? – ನೊಂದು ಕೇಳುತಿಹಳು ತಾಯಿ ಭಾರತಿ

ಮಂಗಳೂರು: ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಮಾನವ ಸಮಾಜ ತಲೆ ತಗ್ಗಿಸುವಂತಹ ಈ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆಗಿದ್ದು, ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.

ಆರೋಪಿಯನ್ನು ಸಿಧಿ ಬಿಜೆಪಿ ಶಾಸಕ ಕೇದಾರ್‌ ನಾಥ್ ಶುಕ್ಲ ಬೆಂಬಲಿಗ ಪ್ರವೇಶ್ ಶುಕ್ಲ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಸ್ ಟ್ವಿಟರ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಆದಿವಾಸಿಗಳ ಹಿತಾಸಕ್ತಿಗಳ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಬುಡಕಟ್ಟು ಜನಾಂಗದ ಬಡವರ ಮೇಲೆ ಈ ರೀತಿ ನಡೆದುಕೊಳ್ಳುತ್ತಿರುವುದು ಖಂಡನೀಯ ಎಂದಿದ್ದಾರೆ.

ಯಾವ ಕಾರಣಕ್ಕೆ ಈ ಅಮಾನುಷ ಕೃತ್ಯ ಎಸಗಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೂಡಲೇ ಆರೋಪಿಯನ್ನು ಬಂಧಿಸಬೇಕೆಂದು ನೆಟ್ಟಿಗರು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಒತ್ತಾಯಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here