ಕಾರು ಮತ್ತು ಬಸ್ಸು ಡಿಕ್ಕಿ-ಕಾರು ಚಾಲಕ ಸ್ಥಳದಲ್ಲಿಯೇ ಮೃತ್ಯು

ಮಂಗಳೂರು(ಶಿವಮೊಗ್ಗ): ಸಕ್ರೆಬೈಲು ಆನೆ ಬಿಡಾರದ ಬಳಿ, ಜು.4 ರ ಸಂಜೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ನವದುರ್ಗ ಬಸ್ಸಿಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ  ಕಾರಿನ ಮುಂಭಾಗ ಪೂರ್ತಿಯಾಗಿ ನಜ್ಜುಗುಜ್ಜಾಗಿದೆ. ಖಾಸಗಿ ಬಸ್ ರಸ್ತೆ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆನೆ ಕ್ಯಾಂಪ್ ಗೂ ಮೊದಲು ಸಿಗುವ ಫಿಶ್ ಹೋಟೆಲ್ ನ ಸಮೀಪ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಓರ್ವ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರು ಮಂಗಳೂರು ತಾಲೂಕಿನ ಎಡಪದವು, ಗಂಜಿಮಠ ನಿವಾಸಿಗಳೆಂದು ತಿಳಿದು ಬಂದಿದೆ. ಅನಾರೋಗ್ಯದಲ್ಲಿದ್ದ ವ್ಯಕ್ತಿ ಆರೋಗ್ಯ ವಿಚಾರಿಸಿ ಹಿಂತಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗವೇ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗಾಯಾಳುಗಳು ಗಂಜಿಮಠದ ಇಸ್ಮಾಯಿಲ್ ಹಾಗೂ ಬಾರ್ದಿಲ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here