ಭೂಮಿ ವಿಚಾರಕ್ಕೆ ತಗಾದೆ – ಕೊರಗಜ್ಜನ ಗುಡಿಗೆ ಬೆಂಕಿ

ಮಂಗಳೂರು(ವೇಣೂರು): ವ್ಯಕ್ತಿಯೊಬ್ಬ ತುಳುನಾಡಿನ ಕಾರಣಿಕ ದೈವವಾದ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ನಲ್ಲಿ ನಡೆದಿದೆ.

ಬಾಡರಿನ ಕೊರಗ ಕಲ್ಲು ಎಂಬಲ್ಲಿ ಕೊರಗಜ್ಜನ ದೈವ ಸಾನಿಧ್ಯದಲ್ಲಿ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ, ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಈ ಸಂಬಂಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿಯೊಬ್ಬರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟಿದ್ದಾರೆ. ಘಟನೆಯನ್ನು ಖಂಡಿಸಿರುವ ಸ್ವಾಮಿ ಕೊರಗಜ್ಜ ಆರಾಧನಾ ಸಮಿತಿಯವರು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here