ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಗೆ ಬಿ ರಾಚಯ್ಯ ವಾರ್ಷಿಕ ದತ್ತಿ ಪ್ರಶಸ್ತಿ

ಮಂಗಳೂರು: ಕರ್ನಾಟಕ ರಾಜ್ಯ ಎಸ್ಸಿ ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ನೀಡುವ 2022-23ನೇ ಸಾಲಿನ ರಾಜ್ಯಮಟ್ಟದ ಬಿ ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ. ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತ ದಮನಿತರ ಪರವಾಗಿ ವೃತ್ತಿಪರತೆಯಿಂದ ದುಡಿದಂತಹ ಹಿರಿಯ ಪತ್ರಕರ್ತರೊಬ್ಬರನ್ನು ಗುರುತಿಸಿ ಪ್ರತಿ ವರ್ಷ ಬಿ ರಾಚಯ್ಯ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ.

ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಎಸ್ಸಿ ಎಸ್ಟಿ ಸಮುದಾಯದ ಮೂವರು ಹಿರಿಯ ಸಂಪಾದಕರಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಗೆ ಕೋಲಾರದ ಸಿ ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರ್ ನ ಮಾಳಪ್ಪ ಅಡ್ಡಸಾರಿ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯೂ 5,000 ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

LEAVE A REPLY

Please enter your comment!
Please enter your name here