ಕೊರಗಜ್ಜನ ಗುಡಿಗೆ ಬೆಂಕಿ ಪ್ರಕರಣ – ಹರೀಶ್ ಪೂಜಾರಿ ಬಂಧನ

ಮಂಗಳೂರು (ಬೆಳ್ತಂಗಡಿ): ಬಜಿರೇ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿಯುಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ಹರೀಶ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ.

ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಇದರ ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗಡೆ ನೀಡಿದ ದೂರಿನಲ್ಲಿ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿಯುಂಟು ಮಾಡಿದ್ದ ಬಗ್ಗೆ ಹರೀಶ್ ಪೂಜಾರಿ, ಡಾ. ರಾಜೇಶ್, ರಮೇಶ್ ಕುಡೇರು, ಓಂ ಪ್ರಕಾಶ್ ಮತ್ತು ಪ್ರಶಾಂತ್ ಎಂಬವರ ಹೆಸರನ್ನು ಉಲ್ಲೇಖಿಸಿದ್ದರು.
ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಡಿವೈಎಸ್‌ಪಿ ಗಾನಾ ಪಿ‌ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್‌ ಸುರೇಶ್‌ ಕುಮಾರ್‌, ಎಸ್ ಐ‌ ಸೌಮ್ಯ ಪರಿಶೀಲನೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇತರ ಆರೋಪಿಗಳ ಪಾತ್ರದ ಕುರಿತು ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here