ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ

ಮಂಗಳೂರು: ಯುವಕನೊಬ್ಬ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಬಾಗಿಬಾಳು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ವೇಣುಗೋಪಾಲ್ ಅಲಿಯಾಸ್ ಮುತ್ತು ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಜೀವಂತವಾಗಿ ಸೆರೆ ಹಿಡಿದ ಯುವಕ. ಜಮೀನಿಗೆ ಹೋಗುತ್ತಿದ್ದ ವೇಳೆ ವೇಣುಗೋಪಾಲ್ ಮೇಲೆ ಚಿರತೆ ದಾಳಿ ಮಾಡಿದ್ದು ತನ್ನ ಜೀವ ರಕ್ಷಿಸಿಕೊಳ್ಳುವ ಉದ್ದೇಶದಿಂದ ಧೈರ್ಯ ಮಾಡಿದ ಯುವಕ ಚಿರತೆಗೆ ಬಡಿಗೆಯಲ್ಲಿ ಹೊಡೆದು, ಅದನ್ನು ಸೆರೆಹಿಡಿದು ತನ್ನ ಬೈಕಿನಲ್ಲಿ ಕಟ್ಟಿಕೊಂಡು ಗ್ರಾಮಕ್ಕೆ ಹೋಗಿದ್ದಾನೆ. ಮುತ್ತುವಿನ ಸಾಹಸವನ್ನು ಮೆಚ್ಚಿದ  ಗ್ರಾಮಸ್ಥರೆಲ್ಲಾ ಸೇರಿ ಗಾಯಗೊಂಡಿದ್ದ ಮುತ್ತುಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಂತರ ಚಿರತೆಯನ್ನು ಬೈಕಿನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಘಟನೆಯ ಮಾಹಿತಿ ನೀಡಿ ಚಿರತೆಯನ್ನು ಹಸ್ತಾಂತರಿಸಿದ್ದಾರೆ.

LEAVE A REPLY

Please enter your comment!
Please enter your name here