ಕುದ್ರೆಪಾಯದಲ್ಲಿ ಉಸ್ಮಾನ್ ಕೊಲೆ-ಕೇರಳದಲ್ಲಿ ಆರೋಪಿಗಳ ಬಂಧನ

ಮಂಗಳೂರು(ಪುತ್ತೂರು): ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಹೋದರರಿಂದ ಹತ್ಯೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ ಕೊಡಗು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ಉಸ್ಮಾನ್‌ರ ಸಹೋದರರಾದ ರಫೀಕ್ ಮತ್ತು ಸತ್ತಾರ್ ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಣ್ಣ ಉಸ್ಮಾನ್‌ ನನ್ನು ಚೂರಿಯಿಂದ ಇರಿದು ಜು.14 ರಂದು ಕೊಲೆ ಮಾಡಿದ್ದರು. ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು, ಅಲ್ಲಿಂದ ಬೇರೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಕೇರಳದಲ್ಲಿ ಆರೋಪಿಗಳ ಇರುವಿಕೆಯನ್ನು ಪತ್ತೆಹಚ್ಚಿದ ಕೊಡಗು ಪೊಲೀಸರು ಕಳೆದ ರಾತ್ರಿ (ಜು.15) ಕೇರಳದಲ್ಲಿ ಬಂಧಿಸಿ ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here