ಅಡ್ಯಾರ್‌ ಬಳಿ ಡಿವೈಡರ್‌ ಗೆ‌ ಬೈಕ್ ಡಿಕ್ಕಿ – ಇಂಜಿನಿಯರಿಂಗ್‌ ವಿದ್ಯಾರ್ಥಿ ಮೃತ್ಯು

ಮಂಗಳೂರು: ದ್ವಿಚಕ್ರ ವಾಹನವೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು, ಅಡ್ಯಾರ್ ಬಳಿ ಜು. 19ರಂದು ನಡೆದಿದೆ.

ಮೃತ ಯುವಕನನ್ನು ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಅವಘಡ ಸಂಭವಿಸಿದ್ದು ಮಹಮ್ಮದ್ ನಶತ್ ಮೂಲತ ಉಪ್ಪಳದವರು ಎನ್ನಲಾಗಿದೆ. ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here