ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಹರಿದ ಕಾರು – ವೀಡಿಯೊ ವೈರಲ್‌ 

ಮಂಗಳೂರು(ಗಾಝಿಯಾಬಾದ್‌): ಬಿಜೆಪಿ ಚಿಹ್ನೆ ಇರುವ ಕಾರೊಂದು ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಚಲಾಯಿಸಿದ ಘಟನೆ ಗಾಝಿಯಾಬಾದ್‌ ನಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಗಾಝಿಯಾಬಾದ್‌ ಪೊಲೀಸರು ಕಾರು ಚಾಲಕನ್ನು ಬಂಧಿಸಿ, ಆತ ಚಲಾಯಿಸುತ್ತಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕವಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಝಿಯಾಬಾದ್‌ನ ಮಹಾಗುಣಪುರಂ ನಿವಾಸಿಯಾಗಿರುವ ಆರೋಪಿ ಸೌರಭ್ ಶರ್ಮಾ ಎಂಬಾತ ತನ್ನ ಸ್ನೇಹಿತನ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್ ಆಗಿದ್ದು, ಅದರಲ್ಲಿ ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪೋಲೀಸರ ದೂರಿನ ಮೇರೆಗೆ ನರಹತ್ಯೆ ಪ್ರಕರಣ ದಾಖಲಾಗಿರುತ್ತದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಆರೋಪಿ ಚಾಲಕನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.  ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಾಝಿಯಾಬಾದ್‌ನ ಕವಿನಗರ ಎಸಿಪಿ ಅಭಿಷೇಕ್ ಶ್ರೀವಾಸ್ತವ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಈ ವೇಳೆ ಸ್ಥಳದಲ್ಲಿದ್ದ ಯಾರೋ ಘಟನೆಯ ವಿಡಿಯೋ ಮಾಡಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here