ವೈಯಕ್ತಿಕ ದ್ವೇಷದ ಹಿನ್ನಲೆ-ಕಾರು ಹತ್ತಿಸಿ ಮಕ್ಕಳ ಕೊಲೆಗೆ ಯತ್ನ-ವಿಡಿಯೋ ವೈರಲ್

ಮಂಗಳೂರು(ಲಕ್ನೋ): ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೆಶದ  ಲಕ್ನೋದಲ್ಲಿ ಮಂಗಳವಾರ ನಡೆದಿದೆ. ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಸದ್ಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಚಾಲಕನ ಕೃತ್ಯಕ್ಕೆ ಭಾರೀ ಆಕ್ರೋಶವೂ ವ್ಯಕ್ತವಾಗುತ್ತಿದೆ.

ಇಬ್ಬರು ಹುಡುಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾರೆ. ಅದರಲ್ಲಿ ಓರ್ವ ಚಿಕ್ಕ ಮಗುವನ್ನು ಎತ್ತಿಕೊಂಡಿದ್ದಾನೆ. ಮಕ್ಕಳು ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದರುರಿನಿಂದ ಬಂದ ಸ್ವಿಫ್ಟ್ ಡಿಸೈರ್ ಕಾರನ್ನು ಚಾಲಕ ಮಕ್ಕಳ ಮೇಲೆ ಹತ್ತಿಸಿದ್ದಾನೆ. ಆದರೆ ಅದೃಷ್ಟವಶಾತ್ ಮೂವರು ಮಕ್ಕಳು ಸಂಭವಿಸಬಹುದಾಗಿದ್ದ ಭಾರೀ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಚಾಲಕನನ್ನು ಗೋವಿಂದ್ ಯಾದವ್ ಎಂದು ಗುರುತಿಸಲಾಗಿದೆ. ಈತ ಅದೇ ಏರಿಯಾದ ನಿವಾಸಿಯಾಗಿದ್ದು, ಮಕ್ಕಳ ತಂದೆಯ ಜೊತೆಗೆ ಇದ್ದಂತಹ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂಬುದಾಗಿ ತನಿಖೆಯ ವೇಳೆ ಬಯಲಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here