ಉಪ ಸಭಾಧ್ಯಕ್ಷರಿಗೆ ಅಗೌರವ-10 ಬಿಜೆಪಿ ಶಾಸಕರು ವಿಧಾನಸಬೆಯಿಂದ ಅಮಾನತು

ಮಂಗಳೂರು(ಬೆಂಗಳೂರು): ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಿಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.

ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‌ಪಾಲ್‌ ಸುವರ್ಣ, ಧೀರಜ್‌ ಮುನಿರಾಜ್‌, ಉಮಾನಾಥ್‌ ಕೋಟ್ಯಾನ್‌ ಸೇರಿದಂತೆ 10 ಮಂದಿಯ ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.  ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆದ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here