ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗೆಜ್ಜೆಗಿರಿ ಭೇಟಿ – ವಿಶೇಷ ಪ್ರಾರ್ಥನೆ ಸಲ್ಲಿಕೆ

    ಮಂಗಳೂರು (ಪುತ್ತೂರು): ಜುಲೈ 22 ರಂದು ಪುತ್ತೂರಿಗೆ ಆಗಮಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶ್ರೀ ಕ್ಷೇತ್ರ ಗೆಜ್ಜಗಿರಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಶಾಸಕ ಅಶೋಕ್ ರೈ ಮತ್ತು ಸಚಿವ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಲಾಯಿತು.

    ಗೆಜ್ಜೆ ಗಿರಿ ಕ್ಷೇತ್ರ ಆಡಳಿತ ಸಮಿತಿ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ಕುರಿತಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಚಿವರು ಅಭಿವೃದ್ಧಿ ಕಾರ್ಯಗಳಿಗೆ ಖಂಡಿತವಾಗಿಯೂ ಸಹಕಾರ ನೀಡುವುದಾಗಿ ಹೇಳಿದರು. ಕ್ಷೇತ್ರಕ್ಕೆ ಆಗಮಿಸಿ ಶಿಲಾನ್ಯಾಸ ನೆರವೇರಿಸಿದ ನೆನಪನ್ನು ಸಚಿವರು ಹಂಚಿಕೊಂಡರು.

    ಈ ಸಂದರ್ಭದಲ್ಲಿ ಶಾಸಕ ಅಶೋಕ್ ರೈ, ಕೆಪಿಸಿಸಿ ಸಂಯೋಜಕ ಹೇಮನಾಥ್ ಶೆಟ್ಟಿ ಕಾವು, ಕ್ಷೇತ್ರ ಸಮಿತಿ ಅಧ್ಯಕ್ಷ ಪಿತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ್ ನಡುಬೈಲು, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕಿರಣ್ ಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    LEAVE A REPLY

    Please enter your comment!
    Please enter your name here