ಆಪ್‌ ಸಂಸದ, ಪರಿಣಿತಿ ಚೋಪ್ರಾ ಅವರ ಬಾವೀ ಪತಿ ರಾಘವ್‌ ಚಡ್ಡಾ ಮೇಲೆ ಕಾಗೆ ದಾಳಿ

ಮಂಗಳೂರು(ನವದೆಹಲಿ): ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಜೊತೆ ಹಸೆಮಣೆ ಏರುವ ತಯಾರಿಯಲ್ಲಿರುವ ಆಪ್‌ ರಾಜ್ಯಸಭಾ ಸಂಸದ ರಾಘವ್‌ ಚಡ್ಡಾಗೆ  ಸಂಸತ್‌ ಭವನದ ಹೊರಗಡೆ ಕಾಗೆ ದಾಳಿ ಮಾಡಿದೆ.

ಸಂಸತ್‌ ಭವನದ ಹೊರಗಡೆ ಫೋನ್‌ನಲ್ಲಿ ಮಾತನಾಡುವ ವೇಳೆ, ಕಾಗೆಯೊಂದು ಅವರ ಮೇಲೆ ದಾಳಿ ಮಾಡಿದೆ. ಕಾಗೆ ಕುಕ್ಕಿದ್ದರಿಂದ ರಾಘವ್‌ ಚಡ್ಡಾಗೆ ಯಾವುದೇ ಸಮಸ್ಯೆ ಆಗಿಲ್ಲ. ರಾಜ್ಯಸಭೆಯ ಕಲಾಪದಲ್ಲಿ ಭಾಗವಹಿಸಿ ಹೊರಗಡೆ ಬರುವಾಗ ಈ ಘಟನೆ ನಡೆದಿದೆ. ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ಬಂದ ಕಾಗೆಯೊಂದು ಅವರಿಗೆ ಕುಕ್ಕಿದೆ.
ಈ ವೇಳೆ ಕಾಗೆಯಿಂದ ತಪ್ಪಿಸಿಕೊಳ್ಳಲು ರಾಘವ್‌ ಚಡ್ಡ ಬಗ್ಗಿದರೂ ಸಹಾಯವಾಗಲಿಲ್ಲ. ರಾಘವ್‌ ಚಡ್ಡಾ ಅವರ ತಲೆಗೆ ಕಾಗೆಯೊಂದು ಕುಕ್ಕಿ ಹೋಗುವ ದೃಶ್ಯವನ್ನು ಪಿಟಿಐ ಫೋಟೋಗ್ರಾಫರ್‌ ಸೆರೆಹಿಡಿದ್ದಾರೆ. ಈ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಹೆಚ್ಚಿನವರು ರಾಘವ್‌ ಚಡ್ಡಾಗೆ ದುರಾದೃಷ್ಟ ಆರಂಭವಾಗಿದೆ ಎನ್ನುವ ಅರ್ಥದಲ್ಲಿ ಕಾಮೆಂಟ್‌ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here