ಸೌಜನ್ಯ ಹತ್ಯಾ ಪ್ರಕರಣ – ಮರು ತನಿಖೆ ನಡೆಸಲು ಸಿಎಂ ಗೆ ಮನವಿ ಸಲ್ಲಿಸಿದ ಸೌಜನ್ಯ ಕುಟುಂಬ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದ ಧರ್ಮಸ್ಥಳದ ಸೌಜನ್ಯ ಕುಟುಂಬ ಸದಸ್ಯರು ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

ಜು.26 ರಂದು ಮಹೇಶ್‌ ಶೆಟ್ಟಿ ತಿಮರೋಡಿ ಅವರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾದ ಸೌಜನ್ಯ ಕುಟುಂಬ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಸಿದೆ. ಉಜಿರೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ 2012 ಅಕ್ಟೋಬರ್‌ 9 ರಂದು ಕಾಣೆಯಾಗಿದ್ದು ಅಕ್ಟೋಬರ್‌ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು.

LEAVE A REPLY

Please enter your comment!
Please enter your name here