ಲಾರಿಯಿಂದ ಲಕ್ಷಾಂತರ ರೂ. ನಗದು ಕಳವುಗೈದ ಆರೋಪಿ ಕಂಡಕ್ಟರ್ ಬಂಧನ

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳವು ಮಾಡಿದ ಆರೋಪಿ ಕಂಡಕ್ಟರ್ ನನ್ನು ಪುತ್ತೂರು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.

ಪುತ್ತೂರಿನ ಅಝರ್  ಟ್ರಾನ್ಸ್‌ಪೋರ್ಟ್ ಸಂಸ್ಥೆಯ ಲಾರಿಯಲ್ಲಿ ಕಂಡಕ್ಟರ್ ಆಗಿರುವ ಹಾವೇರಿ ಜಿಲ್ಲೆಯ ಸವಣೂರು ನಿವಾಸಿ ಶಿವಕುಮಾರ್ ಯಾನೆ ಶಿವು (2೦ವ) ಬಂಧಿತ ಆರೋಪಿ. ಆರೋಪಿಯಿಂದ ಕಳವು ಮಾಡಿದ ಲಕ್ಷಾಂತರ ರೂಪಾಯಿಯ ಪೈಕಿ ಕೆಲವನ್ನು ವಶ ಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here