ಕಿರಿಯ ರೈಡರ್ ಶ್ರೇಯಸ್ ರೈಡಿಂಗ್ ವೇಳೆ ದುರ್ಮರಣ

ಮಂಗಳೂರು: ಚೆನ್ನೈ ನ ಮದ್ರಾಸ್ ಇಂಟರ್ ನ್ಯಾಶನಲ್ ಸರ್ಕ್ಯೂಟ್ ನಲ್ಲಿ ಆಯೋಜಿಸಿದ್ದ ಇಂಡಿಯನ್ ನ್ಯಾಷನಲ್ ಮೋಟಾರು ಸೈಕಲ್ ರೇಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಕಿರಿಯ ರೈಡರ್ ಶ್ರೇಯಸ್ ಹರೀಶ್ ದುರ್ಮರಣಕ್ಕೀಡಾಗಿದ್ದಾರೆ.

ಶ್ರೇಯಸ್ ಹರೀಶ್ ಎಂಬ ಬೆಂಗಳೂರಿನ 13 ವರ್ಷದ ಬಾಲಕ ಸ್ಪರ್ಧೆಯಲ್ಲಿ ಮೂರನೇ ಸುತ್ತಿನ ರೈಡಿಂಗ್ ವೇಳೆ ಅಪಘಾತಕ್ಕೆ ಈಡಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಹಿನ್ನೆಲೆ ಶನಿವಾರ ಮತ್ತು ಭಾನುವಾರದಂದು ನಿಗದಿಯಾಗಿದ್ದ ಉಳಿದ ರೇಸ್ ಗಳನ್ನು ರದ್ದುಗೊಳಿಸಿದೆ.ರಾಷ್ಟ್ರಮಟ್ಟದಲ್ಲಿ ಹಲವಾರು ರೇಸ್ ಗಳಲ್ಲಿ ಭಾಗಿಯಾಗಿ ಅನೇಕ ಪ್ರಶಸ್ತಿಗೆ ಶ್ರೇಯಸ್ ಭಾಜನರಾಗಿದ್ದರು. ಶ್ರೇಯಸ್ ಸಾವಿಗೆ ಪೋಷಕರು ಮಮ್ಮುಲ ಮರುಗಿದ್ದಾರೆ.

LEAVE A REPLY

Please enter your comment!
Please enter your name here