ಯಶವಂತ್‌ ಗುರೂಜಿ ಭವಿಷ್ಯ – ಮಹಾಶಿವರಾತ್ರಿ ಮುನ್ನ ಚುನಾವಣೆ ನಡೆದರೆ ಮಾತ್ರ ಮೋದಿ ಪ್ರಧಾನಿ

ಮಂಗಳೂರು(ನವದೆಹಲಿ): ಮುಂದಿನ ಶಿವರಾತ್ರಿ ಮುಂದೆ ಲೋಕಸಭೆ ಚುನಾವಣೆ ನಡೆದಲ್ಲಿ ಮಾತ್ರವೇ ಪ್ರಧಾನಿ ನರೇಂದ್ರ ಮೋದಿ ಅಧಿಕಾರವನ್ನು ಉಳಿಸಿಕೊಳ್ಳುತ್ತಾರೆ. ಇಲ್ಲದೇ ಇದ್ದಲ್ಲಿ ಮಹಿಳೆಗೆ ಪ್ರಧಾನಿ ಪಟ್ಟ ಸಿಗಲಿದೆ ಎಂದು ಶನೇಶ್ವರ ದೇವಸ್ಥಾನದ ಧರ್ಮದರ್ಶಿ ಯಶವಂತ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಕಾಲಜ್ಞಾನ ಪ್ರಕಾರ ಮುಂದಿನ ಪ್ರಧಾನಿ ಆಗೋ ಯೋಗ ಒಬ್ಬ ಮಹಿಳೆಗೆ ಇದೆ ಎಂದು ಕಾಲಜ್ಞಾನಿ ಡಾ. ಯಶವಂತ್‌ ಗುರೂಜಿ ತುಮಕೂರಿನ ನೊಣವಿನಕೆರೆಯಲ್ಲಿ ಭವಿಷ್ಯ ನುಡಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಇದೇ ಸ್ವಾಮೀಜಿ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ನಿಜವಾಗಿದೆ. ಇದೀಗ ರಾಷ್ಟ್ರ ರಾಜಕಾರಣದ ಬಗ್ಗೆ ಇವರು ಭವಿಷ್ಯ ಹೇಳಿದ್ದಾರೆ.

35 ವರ್ಷಗಳ ಹಿಂದೆ ಒಂದು ಸ್ತ್ರಿ ದೇಶವನ್ನ ಆಳಿರುತ್ತಾರೆ. ಮಹಾಶಿವರಾತ್ರಿ ನಂತರ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಈ ದೇಶವನ್ನ ಒಂದು ಶಕ್ತಿ ಅಂದರೆ ಒಂದು ಸ್ತ್ರೀ ಮಹಾಶಿವರಾತ್ರಿ ನಂತರ ದೇಶವನ್ನು ಆಳಲಿದ್ದಾರೆ. ಕಾಲಜ್ಞಾನ ಭವಿಷ್ಯದ ಪ್ರಕಾರ ಒಂದು ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಿತ್ರಗಳ ಪಕ್ಷಗಳ ಸಹಾಯದಿಂದ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ. ಪ್ರಧಾನಿ ಯೋಗವಿರುವ ಸ್ತ್ರೀ ಯಾರೆಂದು ಮಕರ ಸಂಕ್ರಮಣದ ಹಬ್ಬದಂದು ಹೇಳಲಾಗುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here