ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದರೋಡೆ –  2 ಗಂಟೆ ಅಂತರದಲ್ಲಿ 2 ಪ್ರತ್ಯೇಕ ದರೋಡೆ – ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಭೇಟಿ

ಮಂಗಳೂರು(ಮಂಡ್ಯ): ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ, ಶ್ರೀರಂಗಪಟ್ಟಣ ತಾಲ್ಲೂಕಿನ ಎರಡು ಕಡೆಗಳಲ್ಲಿ ಶನಿವಾರ ತಡರಾತ್ರಿ ಎರಡು ಗಂಟೆ ಅಂತರದಲ್ಲಿ 2 ದರೋಡೆ ಪ್ರಕರಣ ನಡೆದಿವೆ.

ತಾಲ್ಲೂಕಿನ‌ ನಗುವನಹಳ್ಳಿ ಗೇಟ್ ಸಮೀಪ, ಭಾರತ್ ಬೆಂಝ್ ಕಂಪೆನಿ ಎದುರು‌ ಕಾರು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಉಡುಪಿಯ ಶಿವಪ್ರಸಾದ-ಸುಮಾ ದಂಪತಿಗೆ ಚಾಕು ತೋರಿಸಿ ದುಷ್ಕರ್ಮಿಗಳು 30 ಗ್ರಾಂ ಚಿನ್ನಾಭರಣ ದೋಚಿದ್ದಾರೆ. ಹೆಲ್ಮೆಟ್ ಧರಿಸಿದ್ದ ಇಬ್ಬರು ತಡರಾತ್ರಿ 1 ಗಂಟೆ ಸಮಯದಲ್ಲಿ ಈ ಕೃತ್ಯ ಎಸಗಿದ್ದಾರೆ. ಮಧ್ಯರಾತ್ರಿಯೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ‌ನ್. ಯತೀಶ್ ಭೇಟಿ ನೀಡಿದ್ದರು.

ಇದಾದ 2 ಗಂಟೆ ನಂತರ ಗೌರಿಪುರ ಬಳಿ ವೈದ್ಯ ದಂಪತಿಯನ್ನು ಬೆದರಿಸಿ 40 ಗ್ರಾಂ ಚಿನ್ನಾಭರಣ ದೋಚಿದ್ದಾರೆ. ಕೋಲಾರ‌ ಜಿಲ್ಲೆ ಮಾಲೂರಿನ ಡಾ. ರಕ್ಷಿತ್ ರೆಡ್ಡಿ ಮತ್ತು ಡಾ.ಮಾನಸ ದಂಪತಿಗೆ ಚಾಕು ತೋರಿಸಿ ಚಿನ್ನಾಭರಣ ಕಿತ್ತೊಯ್ದಿದ್ದಾರೆ. ಮೈಸೂರಿಗೆ ಬರುತ್ತಿದ್ದ ವೇಳೆ ಡಾ.ರಕ್ಷಿತ್ ರೆಡ್ಡಿ ಅವರ ಕಾರು ಪಂಕ್ಚರ್ ಆಗಿದ್ದು, ಚಕ್ರ ಬಲಿಸುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಎರಡೂ ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here