ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕ ಉಪ್ಪಿನಂಗಡಿ ಪೊಲೀಸ್‌ ವಶಕ್ಕೆ

ಮಂಗಳೂರು: ಮೈಸೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಗಾಂಜಾವನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಇಲ್ಲಿನ ಕೂಟೇಲು ಎಂಬಲ್ಲಿ ಆ.11 ರಂದು ವಶಪಡಿಸಿಕೊಂಡಿದ್ದಾರೆ.

ಮೈಸೂರಿನ ಆಲಿ ಮೊಹಮ್ಮದ್ ಯಾನೆ ಸಲೀಂ ಮೈಸೂರು ಎಂಬಾತನಿಂದ ಗಾಂಜಾವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಲಾರಿ ಚಾಲಕ ರಾಘವೇಂದ್ರ ಅಮೀನ್‌ ಎಂಬಾತ ಮಂಗಳೂರಿಗೆ ತರುತ್ತಿದ್ದ ವೇಳೆ ಉಪ್ಪಿನಂಗಡಿಯ ಕೂಟೇಲು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಅಂದಾಜು 40,000/-ಮೌಲ್ಯದ ಸುಮಾರು 2 ಕೆಜಿ 100 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಲಾರಿಯನ್ನು ವಶಪಡಿಸಿಕೊಂಡು ಅ.ಕ್ರ 105/2023 ಕಲಂ: U/s-,8(c) 20(b) (ii) ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here