ಚಲಿಸುತ್ತಿದ್ದ ಬಸ್ಸಿನ ಫುಟ್ ಬೋರ್ಡ್ ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತ್ಯು

ಮಂಗಳೂರು: ನಗರದ ಸಿಟಿ ಬಸ್ ನ ನಿರ್ವಾಹಕರು ಬಸ್ಸಿನ ಮುಂದಿನ ಬಾಗಿಲಿನಿಂದ ಬಿದ್ದು ಮೃತ ಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ನಿನ್ನೆ ಮಧ್ಯಾಹ್ನ ಸಿಟಿ ಬಸ್ ಸುರತ್ಕಲ್ ನಿಂದ ಮಂಗಳಾದೇವಿಗೆ ತೆರಳುತ್ತಿದ್ದ ಸಂದರ್ಭ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬಸ್ಸಿನ ಮುಂದಿನ ಬಾಗಿಲ ಬಳಿ ನಿಂತಿದ್ದ ನಿರ್ವಾಹಕ ವೀರಯ್ಯ(27)  ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಚಲಿಸುತ್ತಿದ್ದ ಸಿಟಿ ಬಸ್ಸಿನ ಫುಟ್ ಬೋರ್ಡ್ ನಿಂದ ಆಯತಪ್ಪಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವೀರಯ್ಯ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ವೀರಯ್ಯ ಸಾವಿಗೆ ಬಸ್ ಚಾಲಕರು ನಿರ್ವಾಹಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here