ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಧರಣಿ

ಮಂಗಳೂರು: ಸೌಜನ್ಯಾ ಅತ್ಯಾಚಾರ – ಹತ್ಯೆ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ‘ಸೌಜನ್ಯ ಪ್ರಕರಣ- ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಮಂಗಳೂರಿನ ಆಡಳಿತ ಸೌಧದ ಮುಂಭಾಗ ಸೆ.12ರಂದು ಆರಂಭಗೊಂಡಿತು.

ಸೌಜನ್ಯಾ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ಮರುತನಿಖೆ ನಡೆಸಬೇಕು. ತನಿಖಾಧಿಕಾರಿಯನ್ನು ಕೂಡ ತನಿಖೆಗೆ ಒಳಪಡಿಸಬೇಕು. ಮರು ತನಿಖೆಗೆ ಆದೇಶ ಮಾಡುವವರೆಗೂ ಹೋರಾಟ ಮುಂದುವರಿಸಲಾಗುವುದು. ಕಾನೂನಾತ್ಮಕ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಧರಣಿನಿರತರು ತಿಳಿಸಿದರು.

LEAVE A REPLY

Please enter your comment!
Please enter your name here