ಗಣೇಶೋತ್ಸವ – ದ.ಕ.ದಲ್ಲಿ ಸೆ.19 ರಂದು ರಜೆ ನೀಡುವಂತೆ ಸಚಿವರ ಸೂಚನೆ

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದ.ಕ ಜಿಲ್ಲೆಯಾಧ್ಯಂತ ಸರಕಾರಿ ರಜೆಯನ್ನು ಸೆ.18 ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ.

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಸೆ.19ರಂದು ಆಚರಿಸಲಾಗುವ ಹಿನ್ನೆಲೆಯಲ್ಲಿ ಸಾರ್ವತ್ರಿಕ ರಜೆಯನ್ನು ಸೆ.19ರಂದೇ ನೀಡುವಂತೆ ಸ್ಪೀಕರ್‌ ಯು. ಟಿ ಖಾದರ್‌ ಅವರಲ್ಲಿ ಕೋರಿದ್ದ ಹಿನ್ನೆಲೆಯಲ್ಲಿ ತಕ್ಷಣ ಸ್ಪಂದಿಸಿದ ಅವರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮಾತುಕತೆ ನಡೆಸಿ ಸೆ.19ರಂದೇ ರಜೆ ನೀಡುವ ಆಶಾಭಾವ ವಯಕ್ತಪಡಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್‌ ಪದ್ಮರಾಜ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here